ಬೂಟು ಪಾಲೀಶ್ ಮಾಡಿ, ಇಸ್ತ್ರಿ ಹಾಕಿದ ಬಟ್ಟೆ ತೊಟ್ಟು ಆಫೀಸಿಗೆ ಹೊರಟೆ. ‘ಇವತ್ತಾದರು MTC ಬಸ್ಸಿನಲ್ಲಿ ಸೀಟು ಸಿಗಬಹುದು’ ಎಂಬ ಆಸೆ ಇತ್ತು. ರಸ್ತೆಯಲ್ಲೆಲ್ಲಾ ನಿಂತ-ನೀರಲ್ಲಿ ಅಲ್ಲಲ್ಲಿ ಉದ್ಬವವಾಗಿದ್ದ ಕಲ್ಲುಗಳ ಮೇಲೆ ಕಾಲಿಟ್ಟು, ಜಿಗಿಯುತ್ತಾ ಬೂಟ್ಸು ನೆನೆಯದಂತೆ ಕೃತಕ ಕೆರೆಯನ್ನು ದಾಟಿದೆ. ಬೆಳಗಿನ ತಿಂಡಿಗಾಗಿ ಹೋಟೆಲಿನ ಕಡೆ ಮುಖ ಮಾಡಿದೆ. ತೂಡೆ ಕಾಣಿಸುವಂತೆ ಲುಂಗಿಯನ್ನು ಮೇಲೆತ್ತಿಕೊಂಡು, ಸಪ್ಲೈಯರು ಬಕೇಟು-ಸೌಟು ಹಿಡಿದು ಅತ್ತಿತ್ತ ತಿರುಗಾಡುತ್ತಿದ್ದ. ಉಪಹಾರದ ಮನಸ್ಸಾಗದೆ ಮಂಗಳ ಹಾಡಿ ಅಲ್ಲಿಂದ ಹೊರಟೆ. ರಸ್ತೆಯ ಮಗ್ಗುಲಲ್ಲಿಯೇ ಕೋಳಿ-ಸಾಗಿಸುವ ಲಾರಿಯಿಂದ ಬರುತ್ತಿದ್ದ, ಸುವಾಸನೆಯ ನೆರಳಲ್ಲಿ, ಯಾತ್ರಿ-ಸಮೂಹ ತಮ್ಮ ತಮ್ಮ ನಂಬರಿನ ಬಸ್ ನಿರೀಕ್ಷೆಯಲ್ಲಿ ನಿಂತಿದ್ದರು. ದೇವರು ಕೊಟ್ಟ ವಾಸನಾ-ಗ್ರಂಥಿಯನ್ನು ಶಪಿಸುತ್ತಾ, ಬಸ್ ಸ್ಟಾಪಿನಲ್ಲಿ ಅವರನ್ನು ಕೂಡಿಕೊಂಡೆ. ಬಸ್ ಸ್ಟಾಪಿನ ಎದುರಿಗೆ ಏಳೆಂಟು ಅಡಿ ಎತ್ತರದ ಕಟೌಟು ನಿಲ್ಲಿಸಿದ್ದರು. ಯಾರಪ್ಪಾ ಈ ಮಹಾನುಭಾವ ಎಂದು ಆ ಎತ್ತರದ ಕಟೌಟಿನ ಅಡಿಯಲ್ಲಿ ಬರೆದಿದ್ದ ಅಕ್ಷರವನ್ನು ಓದಲು ಪ್ರಯತ್ನಿಸಿದೆ. ಜಿಲೇಬಿಗಳನು ಜೋಡಿಸಿಟ್ಟಂತೆ ಕಾಣಿಸುತ್ತಿದ್ದ, ಲಿಪಿಯಿಂದ ಒಂದು ಪದವನ್ನೂ ಗ್ರಹಿಸಲಾಗಲಿಲ್ಲ. ತೆಲುಗಾಗಿದ್ರೆ ಸ್ವಲ್ಪ ಮಟ್ಟಿಗೆ ಓದಬಹುದಾಗಿತ್ತು. ಕಟೌಟಿನಲ್ಲಿದ್ದ ಹೂವು ಮತ್ತು ದೀಪದ ಚಿತ್ರವನ್ನು ನೋಡಿ, ಇವರು ಇತ್ತೀಚೆಗೆ ಹೊಗೆ ಹಾಕಿಸಿಕೊಂಡವರಿರಬಹುದು ಎಂದು
chennagide le .... swalpa chikkadaythu ansuthe....
ReplyDelete